Show notes
ಪ್ರಚಲಿತ ಶಿಕ್ಷಣ ಪದ್ಧತಿಯು ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಕುಗ್ಗಿಸುತ್ತಿದೆ. ಮಕ್ಕಳಿಗೆ ಶಿಕ್ಷಣದ ಆನಂದಕ್ಕಿಂತ ಪರೀಕ್ಷೆಯ ಭಯವೇ ಹೆಚ್ಚಾಗಿದೆ. ಈಗಿನ ಶಿಕ್ಷಣ ಪದ್ಧತಿಯಿಂದ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಸಂಸ್ಕಾರ ಮೂಡಿಸಲು ಸಾಧ್ಯವೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕಾಗಿದ್ದಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು. ಶಿಕ್ಷಕರು ಸಾಧಕರಾಗಿದ್ದಲ್ಲಿ, ಮಕ್ಕಳಿಗೆ ಅವರು ಒಳ್ಳೆಯ ಸಂಸ್ಕಾರವನ್ನು ನೀಡಬಹುದು.


